ತೀರ್ಥಹಳ್ಳಿ: ಮೈದುಂಬಿ ಹರಿಯುತ್ತಿರುವ ಚಕ್ರಾ ಹಾಗೂ ಸಾವೆಹಕ್ಲು ಜಲಾಶಯಗಳಿಗೆ ಇಂದು ವಿಶೇಷ ಪೂಜೆ ಸಲ್ಲಿಸಿ, ಕ್ಷೇತ್ರದ ಜನತೆ ಹಾಗೂ ರೈತರ ಶ್ರೇಯೋಭಿವೃದ್ದಿಗಾಗಿ ಪ್ರಾರ್ಥಿಸಿ, ಬಾಗಿನ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ತೀರ್ಥಳ್ಳಿ ಶಾಸಕರಾದ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರುಗಳಾದ ಎನ್.ರವಿಕುಮಾರ್, ಡಿ.ಎಸ್ ಅರುಣ್, ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.