Thursday, April 24, 2025
Google search engine
Homeಇ-ಪತ್ರಿಕೆಪೊಲೀಸ್‌  ಕಸ್ಟಡಿಗೆ  ದರ್ಶನ್‌, ಜೈಲಿಗೆ  ಪವಿತ್ರಾ ಗೌಡ

ಪೊಲೀಸ್‌  ಕಸ್ಟಡಿಗೆ  ದರ್ಶನ್‌, ಜೈಲಿಗೆ  ಪವಿತ್ರಾ ಗೌಡ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ ಆರು ಆರೋಪಿಗಳನ್ನು ಕೋರ್ಟ್‌ ಮೂರನೇ ಬಾರಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದರೆ, ಪವಿತ್ರಾ ಗೌಡ  ಮತ್ತು ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಚಿತ್ರ ನಟ ದರ್ಶನ್ ಸೇರಿದಂತೆ 6 ಮಂದಿ ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪವಿತ್ರ ಗೌಡ ಅವರಿಗೆ ನ್ಯಾಯಂಗ ಬಂಧನ ವಿಧಿಸಲಾಗಿರುವುದರಿಂದ ಜೈಲು ಸೇರಲಿದ್ದಾರೆ.

ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಎಲ್ಲ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಎ-2 ಆರೋಪಿಯಾಗಿರುವ ದರ್ಶನ್ ಮತ್ತು ಇತರ ಐವರ ವಿಚಾರಣೆ ಅಗತ್ಯವಿರುವುದರಿಂದ ಸರ್ಕಾರಿ ಅಭಿಯೋಜಕರ ವಿನಂತಿಯ ಮೇರೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಆರೋಪಿಗಳಾದ ವಿನಯ್, ಪ್ರದೋಷ್, ನಾಗರಾಜ್, ಲಕ್ಷ್ಮಣ್ ಮತ್ತು ಧನರಾಜ್‌ ಮತ್ತೆ ಪೊಲೀಸ್‌ ಕಸ್ಟಡಿಯಲ್ಲಿ ದರ್ಶನ್‌ ಅವರೊಂದಿಗೆ ವಿಚಾರಣೆ ಎದುರಿಸಲಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments