ಶಿವಮೊಗ್ಗ: ಜಿಲ್ಲಾ ಪಂಚಾಯತ್ ನ ಸಿಇಒ (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ) ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹೇಮಂತ್ ಎನ್ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಬಳ್ಳಾರಿ ಸಬ್ ಡಿವಿಜನ್ ನ ಸೀನಿಯರ್ ಅಸಿಸ್ಟೆಂಟ್ ಕಮಿಷನರ್ ಆಗಿದ್ದ ಹೇಮಂತ್ ಎನ್ ನೂತನ ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕವಾಗಿದ್ದಾರೆ.
ಸುಧಾಕರ್ ಲೋಖಂಡೆ ಅವರು ಮುಂದಿನ ಆದೇಶ ಬರುವವರೆಗೆ ತಾತ್ಕಾಲಿಕವಾಗಿ ಕರ್ನಾಟಕ ವಿದ್ಯುತ್ ಕೈಗಾರಿಕೆ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.