ಹಾಸನ: ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಚ್ಐಎಂಎಸ್)ದಲ್ಲಿ ಎಂಬಿಬಿಎಸ್ ನ ಮೂರನೇ ವರ್ಷದ ವಿದ್ಯಾರ್ಥಿ ಕುಶಾಲ್ (22) ಶುಕ್ರವಾರ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ.
ಹೊಳೆನರಸೀಪುರ ತಾಲೂಕಿನ ಗೋಹಳ್ಳಿ ಮೂಲದ ಕುಶಾಲ್ ಹೆಚ್ಐಎಂಎಸ್ನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ಓದುತ್ತಿದ್ದ. ಗುರುವಾರ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತ ಕುಶಾಲ್ ಬಡ ಕುಟುಂಬವೊಂದರಲ್ಲಿ ಜನಿಸಿದ್ದನು. ತಂದೆ ಮಂಜುನಾಥ್ ಸಣ್ಣ ವ್ಯಾಪಾರಸ್ಥರಾಗಿದ್ದು, ತಾಯಿ ರೇಖಾ ಟೈಲರ್ ಆಗಿದ್ದಾರೆ.
ಈ ಹಿಂದೆ ಕುಶಾಲ್ನ ಪೋಷಕರು ಕೂಡ ಡೆಂಗ್ಯೂಗೆ ಹಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಜುನಾಥ್ ಚೇತರಿಸಿಕೊಂಡಿದ್ದು, ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಅವರ ತಾಯಿ ರೇಖಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಈವರೆಗೆ ಡೆಂಗ್ಯೂ ಜ್ವರಕ್ಕೆ ಮೂವರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.