
ಶಿವಮೊಗ್ಗ : ಉನ್ನತ ಗುಣಮಟ್ಟದ ಆರೈಕೆಗೆ ಹೆಸರುವಾಸಿಯಾಗಿರುವ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯು,1,000 ಕ್ಕೂ ಹೆಚ್ಚು ಮೊಣಕಾಲು ಮತ್ತು ಚಪ್ಪೆ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಗಮನಾರ್ಹ ಸಾಧನೆಯನ್ನು ಮಾಡಿದೆ. ಇದರೊಂದಿಗೆ ಈ ಸಂಖ್ಯೆಯನ್ನು ತಲುಪಿದ ಈ ಭಾಗದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ. ಚೇತನ್ ಮಠದ್ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ತಂಡದ ಸಾಧನೆಗಳ ಬಗ್ಗೆ ವಿವರಗಳನ್ನು ಹಂಚಿಕೊಂಡರು. 2012 ರಲ್ಲಿ ತನ್ನ ಮೂಳೆ ಶಸ್ತ್ರಚಿಕಿತ್ಸಾ ವಿಭಾಗವನ್ನು (ಆರ್ಥೋಪೆಡಿಕ್) ಪ್ರಾರಂಭಿಸಿದಾಗಿನಿಂದ,ಆಸ್ಪತ್ರೆಯು ಕಳೆದ 13 ವರ್ಷಗಳಲ್ಲಿ ಈ ಮಹತ್ವದ ಅಂಕಿಯನ್ನು ತಲುಪಿದೆ. ಇದರಲ್ಲಿ 200 ಕ್ಕೂ ಹೆಚ್ಚು ಮೊಣಕಾಲು ಆತ್ರ್ರೋಸ್ಕೋಪಿಗಳು ಸೇರಿವೆ. ಇದು ಹರಿದ ಕಾರ್ಟಿಲೇಜ್ ಅಥವಾ ಅಸ್ಥಿರಜ್ಜುಗಳಂತಹ ಸಮಸ್ಯೆಗಳನ್ನು ಸರಿಪಡಿಸಲು ಸಣ್ಣ ಛೇದನದೊಂದಿಗೆ ಕ್ಯಾಮೆರಾವನ್ನು ಬಳಸಿಕೊಂಡು ಮಾಡುವ ಕನಿಷ್ಠ ಆಕ್ರಮಣಕಾರಿ ಚಿಕಿತ್ಸೆಯಾಗಿದೆ ಎಂದರು.
ಸಂಕೀರ್ಣವಾದ ಚಪ್ಪೆ ಶಸ್ತ್ರಚಿಕಿತ್ಸೆಗಳನ್ನು ಸಹ ತಮ್ಮ ತಂಡವು ಮಾಡುತ್ತಿದೆ ಎಂದ ಅವರು, ಕಳೆದ ಒಂದು ವರ್ಷದಿಂದ ಆಸ್ಪತ್ರೆಯಲ್ಲಿ ನಾವು ಸಂಪೂರ್ಣ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗಳನ್ನು ಮಾಡುತ್ತಿದ್ದೇವೆ. ಈಗಾಗಲೇ ಸುಮಾರು 50 ಈ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಎಂದು ಹೇಳಿದರು.
ಮೊಣಕಾಲು ಶಸ್ತ್ರಚಿಕಿತ್ಸೆ ಯಾವಾಗ ? ಇತರ ಚಿಕಿತ್ಸೆಗಳು ಫಲಕಾರಿಯಾಗದಿದ್ದಾಗ ಸಾಮಾನ್ಯವಾಗಿ ಮೊಣಕಾಲು ಶಸ್ತ್ರಚಿಕಿತ್ಸೆಗಳು ಒಂದು ಆಯ್ಕೆಯಾಗುತ್ತವೆ ಎಂದು ಡಾ. ಚೇತನ್ ವಿವರಿಸಿದರು. “ಔಷಧಿ, ಫಿಸಿಕಲ್ ಥೆರಪಿ, ಅಥವಾ ಚುಚ್ಚುಮದ್ದುಗಳಂತಹ ವಿಧಾನಗಳು ನೋವನ್ನು ನಿರ್ವಹಿಸಲು ಅಥವಾ ಕಾರ್ಯವನ್ನು ಸುಧಾರಿಸಲು ವಿಫಲವಾದಾಗ, ಶಸ್ತ್ರಚಿಕಿತ್ಸೆಯು ಮುಂದಿನ ಹಂತವಾಗಿರುತ್ತದೆ ಎಂದು ಅವರು ಹೇಳಿದರು.
ಶಸ್ತ್ರಚಿಕಿತ್ಸೆಯಿಂದ ಸಂಧಿವಾತದಿಂದ (ಅಥ್ರ್ರೈಟಿಸ್) ಚಲನಶೀಲತೆ ತೀವ್ರವಾಗಿ ಸೀಮಿತವಾಗಿರುವ ವೃದ್ಧರು. ಮೊಣಕಾಲಿನ ಕೀಲುಗಳಿಗೆ ಸಂಬಂಧಿಸಿದ ಹರಿದ ಅಸ್ಥಿರಜ್ಜುಗಳು ಅಥವಾ ಮೂಳೆ ಮುರಿತಗಳಂತಹ ತೀವ್ರವಾದ ಗಾಯಗಳಿರುವ ವ್ಯಕ್ತಿಗಳು. ತಿಂಗಳುಗಟ್ಟಲೆ ಶಸ್ತ್ರಚಿಕಿತ್ಸೆಯಲ್ಲದ ಚಿಕಿತ್ಸೆಯನ್ನು ಪಡೆದರೂ ದೀರ್ಘಕಾಲದ ನೋವು ಮತ್ತು ಚಲನಶೀಲತೆಯ ಸಮಸ್ಯೆಗಳನ್ನು ಅನುಭವಿಸುತ್ತಿರುವವರು. ನಡೆಯುವುದು ಅಥವಾ ಮೆಟ್ಟಿಲು ಹತ್ತುವಂತಹ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಕಷ್ಟಪಡುವ ಯಾರಾದರೂ ಇದರ ಪ್ರಯೋಜನ ಪಡೆಯಬಹುದು ಎಂದರು.
ಮೊಣಕಾಲು ಶಸ್ತ್ರಚಿಕಿತ್ಸೆಯು ಅತ್ಯುತ್ತಮ ಫಲಿತಾಂಶಗಳನ್ನು ನೀಡುವ, ಅತೀ ಸುರಕ್ಷಿತ ವಿಧಾನವಾಗಿದೆ,” ಎಂದು ಹೇಳಿದ ಡಾ. ಚೇತನ್ “ತೀವ್ರವಾದ ಗಾಯಗಳು, ಸಂಧಿವಾತ ಅಥವಾ ಇತರ ಚಿಕಿತ್ಸೆಗಳಿಗೆ ಸ್ಪಂದಿಸದ ನಿರಂತರ ನೋವು ಅನುಭವಿಸುತ್ತಿರುವವರಿಗೆ ಇದು ಅತ್ಯುತ್ತಮ ವಿಧಾನ ವಾಗಿದ್ದು, ಇದರಿಂದ ಚಲನೆ ಸುಧಾರಿಸುವದಲ್ಲದೆ, ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ, ಈ ವಿಧಾನವು ಸಾಮಾನ್ಯವಾಗಿ ಸುರಕ್ಷಿತ ಮತ್ತು ಅತ್ಯಂತ ಪರಿಣಾಮಕಾರಿಯಾಗಿದೆ. ಹೆಚ್ಚಿನ ರೋಗಿಗಳು ಗಮನಾರ್ಹ ಸುಧಾರಣೆಯನ್ನು ಕಾಣುತ್ತಾರೆ ಮತ್ತು ಶಸ್ತ್ರಚಿಕಿತ್ಸೆಯ ನಂತರ ವಾರಗಳು ಅಥವಾ ತಿಂಗಳುಗಳಲ್ಲಿ ತಮ್ಮ ದೈನಂದಿನ ದಿನಚರಿಗೆ ಮರಳಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ. ಚಕ್ರವರ್ತಿ ಸಂಡೂರು, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗಿಸ್ ಪಿ ಜಾನ್, ಮಾರ್ಕೇಟಿಂಗ್ ಮುಖ್ಯಸ್ಥರಾದ ರಾಜಾಸಿಂಗ್ ಎಸ್ ವಿ ಹಾಗೂ ಮಾರ್ಕೇಟಿಂಗ್ ಮ್ಯಾನೇಜರ್ ಶೈಲೇಶ್ ಎಸ್ ಎನ್ ಉಪಸ್ಥಿತರಿದ್ದರು.
ಕೋವಿಡ್ ನಂತರ ಶಸ್ತ್ರಚಿಕಿತ್ಸೆಗಳ ಹೆಚ್ಚಳ :
ಚಪ್ಪೆ ಬದಲಿ ಶಸ್ತ್ರಚಿಕಿತ್ಸೆಗಳಲ್ಲಿನ ಒಂದು ಪ್ರವೃತ್ತಿಯನ್ನು ಗಮನಿಸಿರುವ ಡಾ. ಚೇತನ್ “ಕೋವಿಡ್ ನಂತರ ಚಪ್ಪೆ ಬದಲಿ ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿರುವದನ್ನು ನಾವು ಗಮನಿಸಿದ್ದೇವೆ.ಈ ಪ್ರಕರಣಗಳಲ್ಲಿ ಗಣನೀಯ ಸಂಖ್ಯೆಯು ಅವಾಸ್ಕುಲರ್ ನೆಕ್ರೋಸಿಸ್ ಕಾರಣದಿಂದಾಗಿವೆ ಇದು ರಕ್ತದ ಹರಿವು ಕಡಿಮೆಯಾಗುವುದರಿಂದ ಮೂಳೆ ಅಂಗಾಂಶವು ಸಾಯುತ್ತವೆ.ಇದು”ಕೋವಿಡ್-19 ಚಿಕಿತ್ಸೆಯ ಸಮಯದಲ್ಲಿ ಸ್ಟೀರಾಯ್ಡ್ಗಳ ಬಳಕೆಯು ಇದಕ್ಕೆ ಒಂದು ಕಾರಣವಾಗಿರಬಹುದು. ವಿಶೇಷವಾಗಿ ವಯಸ್ಸಾದವರಿಗೆ ಸಕಾಲಿಕ ಚಿಕಿತ್ಸೆಯ ಅಗತ್ಯತೆ ಬಗ್ಗೆ ಒತ್ತಿ ಹೇಳಿದ ಅವರು “ಹೆಚ್ಚಿನ ಕೀಲು ಹಾನಿಯನ್ನು ತಡೆಗಟ್ಟಲು ಮತ್ತು ಸಕ್ರಿಯ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಬೇಗನೆ ಮೊಣಕಾಲು ಶಸ್ತ್ರಚಿಕಿತ್ಸೆಯನ್ನು ಪರಿಗಣಿಸುವುದು ಮುಖ್ಯ.