
ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ ಅಂಗವಾಗಿ ಹಣ್ಣು ಮತ್ತು ಆಹಾರ ಮೇಳ
ಶಿವಮೊಗ್ಗ : ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ ಒಂದು ಮೈಲಿಗಲ್ಲಾಗಿದೆ ಎಂದು ಕೆವಿಕೆ ಅಟಾರಿ ವಲಯ ೧೧ ರ ನಿರ್ದೇಶಕ ವಿ.ವೆಂಕಟ ಸುಬ್ರಮಣಿಯನ್ ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ನವಿಲೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏ.26 ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿರುವ ವೈವಿಧ್ಯಮಯ ಹಣ್ಣುಗಳು ಮತ್ತು ಆಹಾರ ಮೇಳವನ್ನು ರಜತ ಸಂಭ್ರಮ ಸ್ಮರಣಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕೃಷಿ, ಹಣ್ಣು ಮೇಳಗಳ ಆಯೋಜನೆಯು ಕೃಷಿಕ್ಷೇತ್ರ ಸಬಲೀಕರಣಗೊಳಿಸುವಲ್ಲಿ ಉತ್ತಮ ಕಾರ್ಯವಾಗಿದ್ದು, ಇದನ್ನು ಉತ್ತೇಜಿಸುತ್ತಿರುವ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಅಭ್ಯಾಸ ನಂದನೆಗಳು. ಕೃಷಿ ಕ್ಷೇತ್ರದಲ್ಲಿನ ಕ್ರಾಂತಿಕಾರಿಕ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಅತ್ಯುತ್ತಮ ಕೆಲಸ ಮಾಡುತ್ತಿವೆ.
ತರೀಕೆರೆ ಶಾಸಕರು ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಜಿ.ಹೆಚ್. ಶ್ರೀನಿವಾಸಮಾತನಾಡಿ, ಕೆವಿಕೆ ೨ ಲಕ್ಷ ಜನರಿಗೆ ನೇರ ತರಬೇತಿ ನೀಡಿತ್ತಿದಗದು, ಪರೋಕ್ಷವಾಗಿ ೩೫ ಲಕ್ಷ ಜನರಿಗೆ ಸಹಕಾರಿಯಾಗಿದೆ. ಬೀಜ ಉತ್ಪಾದನೆ , ತಾಂತ್ರಿಕತೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ರೈತರಿಗೆ ಬಹು ಉಪಯೋಗವಾಗುವ ಕೆಲಸ ಕೆವಿಕೆ ಮಾಡುತ್ತದೆ ಇದೆ. ಚಿಕ್ಕಮಗಳೂರು ಕೆವಿಕೆ ಸಂಸ್ಥೆಗಳಲ್ಲಿ ಸಹ ಉತ್ತಮ ಕೆಲಸ ಆಗುತ್ತದೆ.
ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಕ್ರಾಂತಿಕಾರಿ ಬದಲಾವಣೆಗೆ ಕೃಷಿ ವಿವಿ ಬೇಕೆಂಬ ಉದ್ದೇಶದಿಂದ ವಿವಿ ಸ್ಥಾಪನೆಯಾಗಿದ್ದು ರೈತರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಹಾಗೂ ಯುವಜನತೆಗೆ ತರಬೇತಿ, ಮಾಹಿತಿ ನೀಡುವಲ್ಲಿ ಬಹಳ ದೊಡ್ಡ ಪಾತ್ರ ವಹಿಸುತ್ತಿದೆ. ಕೃಷಿಯಿಂದ ಉದ್ಯೋಗಾವಕಾಶ ಕೂಡ ಹೆಚ್ಚಾಗಿದೆ ಎಂದರು.
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರೈತ ಮುಖಂಡರಾದ ಕೆ.ಟಿ.ಗಂಗಾಧರ್, ಕೃಷಿ ಸಮಾಜದ ಅಧ್ಯಕ್ಷ ನಾಗರಾಜ್ ಹೆಚ್ ಎನ್ , ಡಾ. ಪಿ.ಕೆ.ಬಸವರಾಜ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ,ರಾಯಚೂರು ವಿಶ್ವವಿದ್ಯಾಲಯದ ಡಾ.ಎನ್ ಹನುಮಂತಪ್ಪ,ವಿಶ್ರಾಂತ ಕುಲಪತಿ ಡಾ.ಪಿ.ನಾರಾಯಣಸ್ವಾಮಿ, ಡಾ.ದಿನಕರ್, ಡಾ.ರವಿ ಭಟ್, ಇತರೆ ಅಧಿಕಾರಿಗಳು, ವಿಜ್ಞಾನಿಗಳು, ವಿದ್ಯಾರ್ಥಿಗಳು, ರೈತರು ಪಾಲ್ಗೊಂಡಿದ್ದರು. ಕೆವಿಕೆ ಮುಖ್ಯಸ್ಥ ಡಾ. ಸುನೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಸ್ತರಣಾಧಿಕಾರಿ ಡಾ.ಜಿ.ಕೆ ಗಿರಿಜೇಶ್ ಸ್ವಾಗತಿಸಿದರು.