Saturday, May 24, 2025
Google search engine
Homeಅಂಕಣಗಳುರಿಕ್ಕಿ ರೈ ರವರ ಮೇಲೆ ಗುಂಡಿನ ದಾಳಿ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಮನವಿ

ರಿಕ್ಕಿ ರೈ ರವರ ಮೇಲೆ ಗುಂಡಿನ ದಾಳಿ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಮನವಿ

ಶಿವಮೊಗ್ಗ: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಎನ್.ಮುತ್ತಪ್ಪ ರೈ ರವರ ಕಿರಿಯ ಪುತ್ರ ರಿಕ್ಕಿ ರೈ ರವರ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಲು ಆಗ್ರಹಿಸಿ ಇಂದು ಬೆಳಗ್ಗೆ ಜಯ ಕರ್ನಾಟಕ ಸಂಘಟನೆಯ ಮಹಿಳಾ ಘಟಕದ ವತಿಯಿಂದ ಜಿಲ್ಲಾ ಪೆÇಲೀಸ್ ರಕ್ಷಣಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಜಯ ಕರ್ನಾಟಕ ಸಂಘಟನೆಯು ಕನ್ನಡ ನಾಡಿನ ನಾಡು, ನುಡಿ, ನೆಲ, ಜಲ ಸೇರಿದಂತೆ ಹಲವಾರು ಕನ್ನಡಪರ ಹೋರಾಟಗಳು, ಜನಪರ ಹೋರಾಟಗಳನ್ನು ಮಾಡುತ್ತಾ ರಾಜ್ಯದಲ್ಲಿ ಸಕ್ರಿಯವಾಗಿದೆ. ಇಂತಹ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮುತ್ತಪ್ಪ ರೈ ರವರ ಸುಪುತ್ರ ರಿಕ್ಕಿ ರೈ ರವರ ಮೇಲೆ ಶೂಟ್‍ಔಟ್ ಮಾಡಿ ಕೊಲೆ ಯತ್ನ ಮಾಡಿರುವುದು ಖಂಡನೀಯ ಎಂದು ಮನವಿದಾರರು ತಿಳಿಸಿದರು.

ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಮತ್ತು ಸರ್ಕಾರದ ವತಿಯಿಂದ ರಿಕ್ಕಿ ರೈ ರವರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಮನವಿಯಲ್ಲಿ ಅಗ್ರಹಿಸಲಾಗಿದೆ.

ಒಂದು ವೇಳೆ ಸೂಕ್ತ ಕ್ರಮ ಕೈ ಗೊಳ್ಳದೇ ಹೋದರೆ ಜಯ ಕರ್ನಾಟಕ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಉಗ್ರವಾದ ಹೋರಾಟ ಹಮ್ಮಿ ಕೊಳ್ಳಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿ ನೀಡುವ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ಮಹಿಳಾ ಅಧ್ಯಕ್ಷೆ ನಾಜೀಮ, ಪ್ರಧಾನ ಕಾರ್ಯದರ್ಶಿ ಪ್ರೇಮಾ ಎ ಎನ್ ಶೆಟ್ಟಿ ,ಸಾಗರ ತಾ.ಘಟಕದ ಅಧ್ಯಕ್ಷೆ ರೇಖಾ ಕೃಷ್ಣಮೂರ್ತಿ, ಪ್ರಮುಖರಾದ ಮೋಹನ್ ದೇವರಾಜ್, ಜಯಂತಿ, ನಿರ್ಮಲ, ಪುಷ್ಪ ,ಸುಜಾತ, ಭಾಗ್ಯಮ್ಮ, ಲಕ್ಷ್ಮಮ್ಮ, ರೇಖಾಮ್ಮ ,ಸೇರಿದಂತೆ ಹಲವರಿದ್ದರು.

RELATED ARTICLES
- Advertisment -
Google search engine

Most Popular

Recent Comments