Saturday, January 18, 2025
Google search engine
Homeಇ-ಪತ್ರಿಕೆಕೊಡಗು: ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಸಿದ್ದರಾಮಯ್ಯ

ಕೊಡಗು: ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಸಿದ್ದರಾಮಯ್ಯ

ಪೊನ್ನಂಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ, ಬಳಿಕ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.

ಗುಡ್ಡ ಕುಸಿತದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ತುರ್ತಾಗಿ ತೂಗು ಸೇತುವೆ, ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments