ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ಕ್ರೀಡಾ ಸಂಕೀರ್ಣದಲ್ಲಿ ಮಕ್ಕಳಿಗಾಗಿ 3ನೇ ಹಂತದಲ್ಲಿ ಬೇಸಿಗೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಈ ಬೇಸಿಗೆ ಶಿಬಿರವು ಮೇ 02 ರಿಂದ 25 ರವರೆಗೆ 21 ದಿನಗಳು ನಡೆಯಲಿದ್ದು, ವಿಶೇಷವಾಗಿ ಈಜು, ಸ್ಕೇಟಿಂಗ್ ಮತ್ತು ಲಾನ್ ಟೆನ್ನಿಸ್ ಕ್ರೀಡೆಗಳಲ್ಲಿ ನುರಿತ ಕ್ರೀಡಾ ತರಬೇತುದಾರರಿಂದ ಬೆಳಿಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ತರಬೇತಿ ನೀಡಲಾಗುವುದು. ವಿಶೇಷವಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರೀಕರಿಗೆ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು. ವಾರದ ಕೊನೆಯ ಶನಿವಾರ ಮತ್ತು ಭಾನುವಾರಗಳಂದು ಈಜು ತರಬೇತಿಯನ್ನು ಪಡೆಯುವ ಅವಕಾಶವಿದ್ದು, ಪ್ರತೀ ಭಾನುವಾರ ಸಹ ಈಜು ತರಬೇತಿಯನ್ನು ಪಡೆಯಬಹುದಾಗಿದೆ. ವಸತಿಶಾಲೆ/ ಪ್ರೌಢಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲಿನಲ್ಲಿ ಅಂದರೆ ಜೂನ್ ತಿಂಗಳ ಪ್ರಾರಂಭದಲ್ಲಿ ವಾರಕ್ಕೆ ಒಂದು ದಿನ ಅಥವಾ ಎರಡು ದಿನದ ತರಬೇತಿಯನ್ನು ಪಡೆಯುವ ಅವಕಾಶವನ್ನು ನೀಡಲಾಗುತ್ತಿದ್ದು, ಆಸಕ್ತ ಶಾಲಾ/ಕಾಲೇಜುಗಳು ಹೆಚ್ಚಿನ ಮಾಹಿತಿಯನ್ನು ಪಡೆದು ಇದರ ಸದುಪಯೋಗವನ್ನು ಪಡೆದುಕೊಳ್ಳುವುದು.
ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳಲಿಚ್ಚಿಸುವ ಕ್ರೀಡಾಸಕ್ತರು ಮಾಹಿತಿಗಾಗಿ ಮೊ.9743820293, 6362200751 (ಈಜು), 7760921936 (ಸ್ಕೇಟಿಂಗ್), 8374335635 (ಟೆನ್ನಿಸ್) ಇವರನ್ನು ಸಂಪರ್ಕಿಸುವಂತೆ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.