Saturday, May 24, 2025
Google search engine
Homeಅಂಕಣಗಳುಕನಿಷ್ಠ ವೇತನ ಅಧಿಸೂಚನೆ ಪರಿಷ್ಕರಿಸುವ ಮೂಲಕ ಕೈಗಾರಿಕೆ ವಲಯಗಳ ಅಸ್ತಿತ್ವ ಕಾಪಾಡಬೇಕು: ಬಿ.ಗೋಪಿನಾಥ್

ಕನಿಷ್ಠ ವೇತನ ಅಧಿಸೂಚನೆ ಪರಿಷ್ಕರಿಸುವ ಮೂಲಕ ಕೈಗಾರಿಕೆ ವಲಯಗಳ ಅಸ್ತಿತ್ವ ಕಾಪಾಡಬೇಕು: ಬಿ.ಗೋಪಿನಾಥ್

ಕನಿಷ್ಠ ವೇತನ ಅಧಿಸೂಚನೆ ಪರಿಷ್ಕರಿಸುವ ಕುರಿತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮ

ಶಿವಮೊಗ್ಗ: ಕಾರ್ಮಿಕ ಇಲಾಖೆ ಹೊರಡಿಸಿರುವ ಕನಿಷ್ಠ ವೇತನಕ್ಕೆ ಸಂಬಂಧಿಸಿದ ಕರಡು ಅಧಿಸೂಚನೆಯನ್ನು ಕೂಡಲೇ ಪರಿಷ್ಕರಿಸುವುದರ ಮೂಲಕ ಸರ್ಕಾರವು ಸಣ್ಣ, ಅತಿ ಸಣ್ಣ, ಮಧ್ಯಮ ಕೈಗಾರಿಕೆ ವಲಯಗಳ ಅಸ್ತಿತ್ವ ಕಾಪಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಕಾರ್ಮಿಕ ಇಲಾಖೆ ಹೊರಡಿಸಿರುವ ಕನಿಷ್ಠ ವೇತನಕ್ಕೆ ಸಂಬಂಧಿಸಿದ ಕರಡು ಅಧಿಸೂಚನೆ ಪರಿಷ್ಕರಣೆ ಕುರಿತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಪ್ರಸ್ತಾಪಿಸಿರುವ ಕನಿಷ್ಠ ವೇತನದ ಕರಡು ಅಧಿಸೂಚನೆಯಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೊಡೆತ ಬೀಳಲಿದೆ ಎಂದು ತಿಳಿಸಿದರು.

ಅಧಿಸೂಚನೆ ಪರಿಣಾಮ ಕೈಗಾರಿಕಾ ಉದ್ಯಮಿಗಳು ಕಾರ್ಮಿಕರ ಸಂಖ್ಯೆ ಕಡಿಮೆಗೊಳಿಸಿ ಯಂತ್ರೋಪಕರಣಗಳಿಗೆ ಹೆಚ್ಚು ಅವಲಂಬಿತರಾಗುತ್ತಾರೆ. ಅತಿ ಕಡಿಮೆ ಲಾಭದಲ್ಲಿ ಕೈಗಾರಿಕೆ ನಡೆಸುತ್ತಿದ್ದಾರೆ, ಕೈಗಾರಿಕೆಗಳು ನೆರೆ ರಾಜ್ಯಗಳಿಗೆ ವಲಸೆ ಹೋಗುವ ಅಪಾಯವೂ ಸಹ ಇದೆ. ಸರ್ಕಾರ ಎಂಎಸ್ ಎಂ ಇ ಮತ್ತು ದೊಡ್ಡ ಕೈಗಾರಿಕೆಗಳಿಗೆ ಪ್ರತ್ಯೇಕವಾಗಿ ಭಿನ್ನ ಕನಿಷ್ಠ ವೇತನ ಸ್ಲಾಬ್ ಪರಿಚಯಿಸಬೇಕು ಹಾಗೂ ಕಾರ್ಮಿಕ ವೇತನ ತರ್ಕಬದ್ಧವಾಗಿ ನಿಗದಿಪಡಿಸಲು ತಜ್ಞರ ಸಮಿತಿ ನೇಮಿಸಬೇಕು ಎಂದರು.

ಎಫ್ ಕೆಸಿಸಿಐ ಕಾರ್ಮಿಕ ಕಾನೂನು ಸಮಿತಿ ಮುಖ್ಯಸ್ಥ ಪಿ.ಸಿ.ರಾವ್ ಮಾತನಾಡಿ, ಕರಡು ಅಧಿಸೂಚನೆ ಜಾರಿಯಿಂದ ವಾಣಿಜ್ಯ ಮತ್ತು ಕೈಗಾರಿಕೆಗಳ ಮೇಲೆ ಬೀರುವ ಪರಿಣಾಮದ ಬಗ್ಗೆ ವಿವರಿಸಿ ಸರ್ಕಾರಕ್ಕೆ ಅಹವಾಲು ತಲುಪಿಸಲು ಕಾನೂನು ಹೋರಾಟ ಮಾಡುವ ಬಗ್ಗೆ ಮಾಹಿತಿ ನೀಡಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್,

ಉದ್ಯಮಿಯಾಗಿ ವೇತನ ಹೆಚ್ಚಳದ ಕರಡು ಅಧಿಸೂಚನೆಯ ಸಾಧ್ಯತೆಗಳನ್ನು ಅರಿತಿದ್ದು, ಕೈಗಾರಿಕಾ ಸಂಘದ ನ್ಯಾಯೋಚಿತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್, ಮಾಜಿ ಅಧ್ಯಕ್ಷರಾದ ಎನ್.ಗೋಪಿನಾಥ್, ಡಿ.ಎಂ.ಶಂಕರಪ್ಪ, ನಿರ್ದೇಶಕರಾದ ಗಣೇಶ ಎಂ.ಅಂಗಡಿ, ವಸಂತ್ ಹೋಬಳಿದಾರ್, ಜಿ.ವಿ.ಕಿರಣ್ ಕುಮಾರ್, ಹೆಚ್.ಎಸ್.ನರೇಂದ್ರ, ಎಸ್ ಪಿ ಶಂಕರ್, ವಿ ಕೆ ಜೈನ್, ಲಕ್ಷ್ಮೀದೇವಿ ಗೋಪಿನಾಥ್, ಸಹನಾ ಸುಭಾಷ್, ಪ್ರದೀಪ್ ಎಲಿ, ಶರತ್, ವಿನೋದ್ ಕೆ, ಕಾರ್ಯಕಾರಿ ಕಾರ್ಯದರ್ಶಿ ಎಚ್. ಎಚ್. ಕಮಲಾಕ್ಷರಪ್ಪ ಮತ್ತು ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ, ಜಿಲ್ಲಾ ಕೈಗಾರಿಕಾ ಸಂಘದ ಕಾರ್ಯದರ್ಶಿ ವಿಶ್ವೇಶರಾಯ, ಜಿಲ್ಲಾ ಔಷಧ ವ್ಯಾಪಾರ ಸಂಘದ ಅಧ್ಯಕ್ಷ ಮಧಕರ್ ಶೆಟ್ಟಿ, ವಿತರಕರ ಸಂಘದ ಅಧ್ಯಕ್ಷ ದೇವರಾಜ್, ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹಾಗೂ ಎಫ್ ಕೆ ಸಿ ಸಿ ಐ ಡೈರೆಕ್ಟರ್ ವೀರೇಂದ್ರ ಕಾಮತ್, ಹಾಗೂ ಉದ್ಯಮಿಗಳು, ಸಂಯೋಜಿತ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments