ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿಯನ್ನು ವರ್ಗೀಕರಿಸಿ, ಉಪವರ್ಗೀಕರಣ ಕೈಗೊಳ್ಳಲು ಅವಶ್ಯವಿರುವ ದತ್ತಾಂಶವನ್ನು ಸಂಗ್ರಹಿಸಿ ಸಮೀಕ್ಷೆಯನ್ನು ಕೈಗೊಳ್ಳಲು ಉದ್ದೇಶಿಲಾಗಿದೆ.
ಈ ಸಮೀಕ್ಷಾ ಕಾರ್ಯವನ್ನು ಮೇ. 05 ರಿಂದ 17ರವರೆಗೆ ಕೈಗೊಳ್ಳಲಾಗುತ್ತಿದ್ದು, ಸಮೀಕ್ಷಾ ಸಮಯದಲ್ಲಿ ಮನೆಮನೆಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸುವುದರಿಂದ ಈ ದಿನಾಂಕಗಳಂದು ಮನೆಯ ಹಿರಿಯ ಸದಸ್ಯರು ಹಾಜರಿದ್ದು, ಅಗತ್ಯ ದಾಖಲಾತಿಗಳೊಂದಿಗೆ ಕುಟುಂಬದ ಸಂಪೂರ್ಣ ಮಾಹಿತಿಯನ್ನು ಸಮೀಕ್ಷಾದಾರರಿಗೆ ನೀಡಿ ಸಹಕರಿಸುವಂತೆ ತೀರ್ಥಹಳ್ಳಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.